ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ಪ್ರಸ್ತಾಪವಾದ ಏಕೈಕ ರಾಜ್ಯ ಕರ್ನಾಟಕ! ಹೌದು, ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದು, ಈ ಬಾರಿ ಕರ್ನಾಟಕದ ಹೆಸರು ಮಾತ್ರ ಬಜೆಟ್ನಲ್ಲಿ ಪ್ರಸ್ತಾಪವಾಗಿದೆ.
ಬಜೆಟ್ ವೇಳೆ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆ ಸಲುವಾಗಿ 5,300 ಕೋಟಿ ರೂ. ಕೇಂದ್ರದಿಂದ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ರಾಜ್ಯಕ್ಕೆ ನಿರ್ದಿಷ್ಟವಾಗಿ ಘೋಷಣೆಯಾದ ಏಕೈಕ ಯೋಜನೆ ಇದಾಗಿದೆ.