ವಾಕ್ ಟು ವರ್ಕ್ ಅನುಕೂಲವಾಗುವಂತೆ ಕೈಗಾರಿಕಾ ಟೌನ್ಶಿಪ್- ಸಚಿವ ನಿರಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಬೆಂಗಳೂರು: ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
ಜೆಡಿಎಸ್‍ನ ಸಿ.ಎನ್. ಮಂಜೇಗೌಡರಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್‍ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
“ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಹೂಡಿಕೆದಾರರಿಗೆ ಸೌಲಭ್ಯಗಳು ಮತ್ತು ರಿಯಾಯ್ತಿಗಳನ್ನು ನೀಡುವುದನ್ನು ಕಡಿಮೆ ಮಾಡಿದ್ದು, ರಾಜ್ಯದ 2ನೇ ಹಂತದ ನಗರಗಳಾದ ತುಮಕೂರು, ಕಲ್ಬುರ್ಗಿ, ಬೆಳಗಾವಿ ಸೇರಿದಂತೆ ವಿವಿಧ ನಗರಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ, ನೆರವು, ರಿಯಾಯ್ತಿ ನೀಡಲು ಉದ್ದೇಶಿಸಲಾಗಿದೆ,” ಎಂದು ಹೇಳಿದರು.

ಕನ್ನಡಿಗರಿಗೆ ಆದ್ಯತೆ
“ಹೊಸ ಕೈಗಾರಿಕಾ ನೀತಿ-2020-25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ . ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು,” ಎಂದು ಅವರು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!