ವಿವಿಧ ಕ್ಷೇತ್ರದ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಸಾಧಕರಿಗೆ ಇಂದು ಪ್ರದಾನ ಮಾಡಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 67 ಮಂದಿ ಸಾಧಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.

ಇಸ್ರೋ ಮಾಜಿ ನಿರ್ದೆಶಕ ಶಿವನ್, ಸಾಹಿತಿ ಆ.ರಾ. ಮಿತ್ರ, ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ನಿವೃತ್ತ ಐಎಎಸ್ ಅಧಿಕಾರಿ ಎಂ.ಮದನ್ ಗೋಪಾಲ್, ಶಿಕ್ಷಣ ತಜ್ಞ ಸುಬ್ಬರಾವ್ ಶೆಟ್ಟಿ ಸಹಿತ 67 ಮಂದಿ ಸಾಧಿಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

ಈ ವೇಳೆ ಕನ್ನಡ ಮತ್ತು ಸಂಸ್ಕ‍್ರತಿ ಸಚಿವ ಸುನೀಲ್ ಕುಮಾರ್, ಅಶೋಕ್ ಮತ್ತಿತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!