ಪುನೀತ್ ಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧದ ಮುಂಭಾಗ ಅಭಿಮಾನಿಗಳ ದಂಡು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದಿಂದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿಧಾನಸೌಧಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಕೆಲವೇ ಕ್ಷಣದಲ್ಲಿ ಕಾರ್ಯಕ್ರಮ ಆರಂಭವಾಗಿದೆ.
ಈಗಾಗಲೇ ಅಭಿಮಾನಿಗಳ ದಂಡು ಲ್ಲಿ ವಿಧಾನಸೌಧ ಮುಂಭಾಗದಲ್ಲಿ ಜಮಾಯಿಸಿದ್ದು, ಅಪ್ಪುವಿನ ಸಂಭ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಧಾನಸೌಧಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್‌ ಮತ್ತು ಜ್ಯೂ. ಎನ್‌ ಟಿಆರ್‌ ಆಗಮಿಸಲಿದ್ದಾರೆ. ರಾಜ್ ಕುಟುಂಬವು ಬಂದಿದ್ದಾರೆ.
ವಿಧಾನಸೌಧ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು 7 ಜನ ಎಸಿಪಿ, 16 ಜನ ಇನ್ಸ್‌ಪೆಕ್ಟರ್, 25 ಪಿಎಸ್‌ಐ 300 ಕಾನ್ಸ್‌ಟೇಬಲ್‌ಗಳು ಹಾಗೂ 6 ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!