ಕಾರ್ತಿಕ್ ಮೇರ್ಲ ಕೊಲೆ ಆರೋಪಿ ಚರಣ್ ರೈಯ ಬರ್ಬರ ಹತ್ಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಎರಡೂವರೆ ವರ್ಷಗಳ ಹಿಂದೆ ಸಂಪ್ಯದ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದಿದ್ದ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಕಾರ್ಯದರ್ಶಿ ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ ಹತ್ಯೆಯ ಆರೋಪಿಯನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಆಯುಧದಿಂದ ಕೊಚ್ಚಿ ಹತ್ಯೆಗೈದ ಘಟನೆ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ಚರಣ್ ರೈ (೨೮) ಮೃತ ಯುವಕ. ಈತ ಕಾರ್ತಿಕ್ ಮೇರ್ಲ ಹತ್ಯೆಯ ಮೂವರು ಆರೋಪಿಗಳ ಪೈಕಿ ಓರ್ವ.
ಚರಣ್ ಅವರ ಪತ್ನಿ ಪೆರ್ಲಂಪಾಡಿ ಮೂಲದವರಾಗಿದ್ದು, ಅಲ್ಲಿ ಚರಣ್ ಮೆಡಿಕಲ್ ಶಾಪ್ ತೆರೆಯಲು ಸಿದ್ದತೆ ನಡೆಸಿದ್ದರು. ಪೆರ್ಲಂಪಾಡಿಯ ಮೇಲಿನ ಪೇಟೆಯ ಕಾಂಪ್ಲೆಕ್ಸ್‌ನಲ್ಲಿ ಮೆಡಿಕಲ್ ಶಾಪ್ ನಾಳೆ ಶುಭಾರಂಭಗೊಳ್ಳಲಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗಡಿಗೆ ಬೇಕಾದ ವಸ್ತುಗಳನ್ನು ಜೋಡಿಸುವ ಕಾರ್ಯದಲ್ಲಿ ಚರಣ್ ತೊಡಗಿಸಿಕೊಂಡಿದ್ದ ಸಂದರ್ಭ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಚರಣ್‌ಗೆ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!