ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ತಿಕ ಮಾಸದ ಕೊನೆ ಸೋಮವಾರ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಬೇಗೂರಿನ ನಾಗಲಿಂಗೇಶ್ವರ ದೇವಾಲಯದಲ್ಲಿ ಇಂದು ಲಕ್ಷದೀಪೋತ್ಸವ ನಡೆಯಲಿದೆ.
ಹೀಗಾಗಿ ದೇವಾಲಯಕ್ಕೆ ಸುಮಾರು 80,000 ರಿಂದ 90,000 ಸಾವಿರ ಭಕ್ತರು ದೇವಾಲಯಕ್ಕೆ ಆಗಮಿಸಲಿದ್ದಾರೆ. ಇದರಿಂದ ಬೇಗೂರಿನ ರಸ್ತೆಗಳಲ್ಲಿ ಹೆಚ್ಚಿನ ವಾಹನಸಂಚಾರ ದಟ್ಟಣೆ ಉಂಟಾಗಲಿದೆ. ಈ ಸಂಬಂಧ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಬೇಗೂರು ರಸ್ತೆಯ ಪಿ.ಕೆ ಕಲ್ಯಾಣ ಮಂಟಪ ಜಂಕ್ಷನ್ನಿಂದ ಬೇಗೂರು ಕೊಪ್ಪ ರಸ್ತೆಯ ಏಕನಾ ಆಸ್ಪತ್ರೆ ಜಂಕ್ಷನ್ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮಣಿಪಾಲ್ ಕೌಂಟಿ ರಸ್ತೆಯ ಪಾಲ್ಕನ್ ಮಾರ್ಕೆಟ್ ಜಂಕ್ಷನ್ನಿಂದ ಬೇಗೂರು ನಾಗಲಿಂಗೇಶ್ವರ ದೇವಸ್ಥಾನದವರೆಗೆ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ. ಡಿಎಲ್ಎಫ್ ರಸ್ತೆಯ ಡಿಎಲ್ಎಫ್ ಜಂಕ್ಷನ್ನಿಂದ ಬೇಗೂರು ಕೆರೆಕಟ್ಟೆ ಜಂಕ್ಷನ್ವರೆಗೆ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.