ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರುನಾಡ ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಹುಲ್ ಗಾಂಧಿ ವಿಶೇಷ ವಿಮಾನದ ಮೂಲಕ ಮಂಡ್ಯ ತಲುಪಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲ ಸೂಚಿಸಿದ್ದಾರೆ. ಮಂಡ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ.
ಮಂಡ್ಯದ ಪಿಇಎಸ್ ಕ್ಯಾಂಪಸ್ ನಲ್ಲಿ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಲಿದ್ದಾರೆ. ನಂತರ ರಾಹುಲ್ ಗಾಂಧಿ ಕೋಲಾರಕ್ಕೆ ತೆರಳಿ ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ.