ಹೊಸ ದಿಗಂತ ಡಿಜಿಟಲ್ ಡೆಸ್ಕ್, ಮಂಗಳೂರು:
ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಾಸರಗೋಡು ಜಿಲ್ಲೆಯ ಚೀಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಚೆಂಬ್ರಕಾನ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಪ್ರಾಥಮಿಕ ತನಿಖೆಗಳ ಪ್ರಕಾರ ಸಜೀನಾ (34), ಗೌತಮ್ (9) ಹಾಗೂ ತೇಜಸ್ (6) ಎಂದು ಗುರುತಿಸಲಾಗಿದೆ.
ಘಟನೆ ಮಂಗಳವಾರ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಸಜೀನಾ ಕೈಯ ನರ ಕತ್ತರಿಸಿ ಬಳಿಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿದ್ದರೆ, ಮಕ್ಕಳು ವಿಷ ಸೇವಿಸಿ ಮೃತಪಟ್ಟ ಸ್ಥಿತಿಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಚೀಮೇನಿ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.