ಕಾಶಿ ಚಂದ್ರಮೌಳೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿರುವ ಚಂದ್ರಮೌಳೇಶ್ವರ ದೇಗುಲದಲ್ಲಿ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿದೆ. ಈ ಘಟನೆಯನ್ನು ಸಾವಿರಾರು ಭಕ್ತರು ಕಣ್ಣಾರೆ ಕಂಡರು.

ಬೆಳಗ್ಗೆ 7.50ಕ್ಕೆ ಸರಿಯಾಗಿ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿದೆ. ಈ ಅದ್ಭುತ ನೋಡಲು ಹಲವೆಡೆಯಿಂದ ಭಕ್ತರು ಆಗಮಿಸಿದರು.

ಈ ಬಾರಿ ಅರ್ಧಗಂಟೆ ತಡವಾಗಿ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿದೆ. ಪ್ರತಿ ವರ್ಷ ಮಕರ ಸಂಕ್ರಮಣದ ದಿನದಂದು ಈ ದೇಗುಲದಲ್ಲಿ ವಿಸ್ಮಯವುಂಟಾಗುತ್ತದೆ. ಆಗ ದೇಗುಲದಲ್ಲಿ ವಿಶೇಷ ಪೂಜೆಯನ್ನು ಆಚರಿಸಲಾಗುತ್ತದೆ.

ದೇಗುಲದಲ್ಲಿ ಮುಮ್ಮಡಿ ಕಷ್ಣರಾಜ ಒಡೆಯರ್ ಅವರು ತಮ್ಮ ತಂದೆ ಖಾಸಾ ಚಾಮರಾಜ ಒಡೆಯರ್ ಅವರ ಸ್ಮರಣೆಗಾಗಿ 18ನೇ ಶತಮಾನದಲ್ಲಿ ಈ ದೇವಾಲಯವನ್ನು ನಿರ್ಮಿಸಿದರು. ಈ ದೇವಾಲಯದಲ್ಲಿ ಕಾಶಿಯಿಂದ ತರಿಸಿದ ಶಿವಲಿಂಗವನ್ನು ಕಾವೇರಿ ನದಿಯ ದಂಡೆಯಲ್ಲಿ ಪ್ರತಿಷ್ಠಾಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!