ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಬೇಕಾದರೆ ಕಾಶ್ಮೀರ ವಿವಾದ ಇತ್ಯರ್ಥವಾಗಬೇಕು: ಪಾಕ್​ ನಿಯೋಜಿತ ಪ್ರಧಾನಿ ಶೆಹಬಾಜ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ವಿಪಕ್ಷ ಮೈತ್ರಿಕೂಟದ ಪ್ರಮುಖ ಹಾಗೂ ಪಿಎಂಎಲ್‌-ಎನ್‌ ನಾಯಕ ಶೆಹಬಾಜ್‌ ಷರೀಫ್‌ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿರುವ ಅವರು, ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಬೇಕಾದರೆ ಕಾಶ್ಮೀರ ವಿವಾದ ಇತ್ಯರ್ಥವಾಗಬೇಕು ಎಂದಿದ್ದಾರೆ.
ಸಂಸತ್​​ನಲ್ಲಿ ಮಾತನಾಡಿರುವ ಅವರು, ಭಾರತದೊಂದಿಗೆ ನಾವು ಉತ್ತಮ ಸಂಬಂಧ ಬೆಳೆಸಲು ಬಯಸುತ್ತೇವೆ. ಆದರೆ, ಜಮ್ಮು-ಕಾಶ್ಮೀರದ ವಿವಾದ ಇತ್ಯರ್ಥವಾಗುವುದಕ್ಕೂ ಮುಂಚೆ ಅದು ಸಾಧ್ಯವಿಲ್ಲ. ಈ ವಿಚಾರವನ್ನ ನಾವು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸಲು ಮುಂದಾಗುತ್ತೇವೆ ಎಂದಿದ್ದಾರೆ.
ಸಾರ್ವಜನಿಕ ಭಾಷಣಗಳಲ್ಲಿ ವೇಳೆ ಅನೇಕ ಸಲ ಸಂಯಮ ಕಳೆದುಕೊಳ್ಳುವ ಇವರು, ಈ ಹಿಂದೆ ಕೂಡ ಅನೇಕ ಸಲ ಜಮ್ಮು-ಕಾಶ್ಮೀರದ ವಿಚಾರವಾಗಿ ಶೆಹಬಾಜ್ ಷರೀಫ್ ಮಾತನಾಡಿದ್ದಾರೆ .
ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರನಾಗಿರುವ ಶೆಹಬಾಜ್​ ಇಂದು ರಾತ್ರಿ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದು, ಹೊಸ ಸಚಿವ ಸಂಪುಟ ರಚನೆ ಮಾಡುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!