ಕಾಶ್ಮೀರಿ ಪಂಡಿತರ ಮೇಲೆ ಉಗ್ರರ ಗುಂಡಿನ ದಾಳಿ: ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡ ಉಗ್ರರು ಸಹೋದರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ್ ಪ್ರಾಣ ಕಳೆದುಕೊಂಡಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಪಿಯಾನ್ ಜಿಲ್ಲೆಯ ಚೋಟಿಪೋರಾ ಪ್ರದೇಶದಲ್ಲಿರುವ ಸೇಬಿನ ತೋಟದಲ್ಲಿ ಗುಂಡಿನ ದಾಳಿ ನಡೆಸಿ ಕೃತ್ಯ ಎಸಗಿದ್ದಾರೆ. ಪೊಲೀಸರು ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದು, ಆ ಪ್ರದೇಶಗಳಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ಮೃತರನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ರಾಜ್ಯಪಾಲ ಮನೋಜ್ ಸಿನ್ಹಾ ಗುಂಡಿನ ದಾಳಿಯನ್ನು ಖಂಡಿಸಿದ್ದು, ಮೃತರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಜೊತೆಗೆ ಶೋಪಿಯಾನ್‌ನಲ್ಲಿ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿ ಅತ್ಯಂತ ಕ್ರೂರ ಮತ್ತು ದುಃಖ ತಂದಿದೆ. ನಾವು ಸದಾ ಸುನೀಲ್ ಕುಮಾರ್ ಅವರ ಕುಟುಂಬದೊಂದಿಗೆ ಇರುತ್ತೇವೆ. ಗಾಯಾಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಈ ಗುಂಡಿನ ದಾಳಿಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಶೋಪಿಯಾನ್‌ನಲ್ಲಿ ನಡೆದ ಹತ್ಯೆಯ ಬಗ್ಗೆ ಕೇಳಿ ತುಂಬಾ ದುಃಖವಾಗಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ನಾಗರಿಕರು ಶಾಂತಿಯುತ ಜೀವನ ನಡೆಸಬೇಕು. ಆ ಪ್ರದೇಶ ಮತ್ತೆ ಸಹಜ ಸ್ಥಿತಿಗೆ ಬರಬೇಕು ಎಂದು ಬಯಸುತ್ತೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!