Thursday, March 30, 2023

Latest Posts

BIG NEWS| ಪುಲ್ವಾಮಾದಲ್ಲಿ ಉಗ್ರರ ಗುಂಡಿನ ದಾಳಿ: ಕಾಶ್ಮೀರಿ ಪಂಡಿತನ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾನುವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ಕಾಶ್ಮೀರಿ ಪಂಡಿತನ ಹತ್ಯೆಗೈಯಲಾಗಿದೆ. ಸಂಜಯ್ ಶರ್ಮಾ (40) ಉಗ್ರರ ದಾಳಿಗೆ ಬಲಿಯಾದ ಕಾಶ್ಮೀರಿ ಪಂಡಿತ. ಈತ ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂಜಯ್‌ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರದ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ಬಳಿಕ ಪ್ರದೇಶವನ್ನು ಸುತ್ತುವರಿದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯು ಶರ್ಮಾ ಹತ್ಯೆಯನ್ನು ತೀವ್ರವಾಗಿ ಖಂಡಿಸಿದೆ ಮತ್ತು ಘಟನೆಯನ್ನು ಹೃದಯ ವಿದ್ರಾವಕ ಮತ್ತು ಹೇಡಿತನದ ಕೃತ್ಯ ಎಂದು ಬಣ್ಣಿಸಿದೆ. “ಘೋರ ಅಪರಾಧ” ದ ಅಪರಾಧಿಗಳ ವಿರುದ್ಧ  ತಕ್ಕ ಶಕ್ಷೆಯಾಗಬೇಕೆಂದು ಒತ್ತಾಯಿಸಿದೆ. ಕೃತ್ಯವೆಸಗಿದವರಿಗಾಗಿ ಶೋಧಕಾರ್ಯ ಬಿರುಸುನಿಂದ ಸಾಗಿದೆ.

ಮೇ 12, 2022 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಹತ್ಯೆಯ ಆರೋಪದ ಮೇಲೆ ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರಿ ಪಂಡಿತರು ಕಣಿವೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!