ಕಾಶಿ ವಿಶ್ವನಾಥನ ದರ್ಶನ ಪಡೆದ ನೇಪಾಳ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್
ವಾರಣಾಸಿ:
ಕಳೆದ ಮೂರು ದಿನಗಳಿಂದ ಭಾರತದ ಅಧಿಕೃತ ಭೇಟಿಯಲ್ಲಿರುವ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ಭಾನುವಾರ ವಾರಣಾಸಿಗೆ ಭೇಟಿ ನೀಡಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೇವುಬಾ ಮತ್ತು ಪತ್ನಿ ಅರ್ಜು ದೇವುಬಾ ಅವರನ್ನು ಸ್ವಾಗತಿಸಿದರು. ವಾರಣಾಸಿಯ ಕಾಲ ಭೈರವ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನೇಪಾಳ ಪ್ರಧಾನಿಯ ಭಾರತ ಪ್ರವಾಸ ಇಂದು ಕೊನೆಗೊಳ್ಳಲಿದೆ. ನಿನ್ನೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನೇಪಾಳ ಪ್ರಧಾನಿ ಅನೇಕ ಯೋಜನೆಗಳಿಗೆ ಚಾಲನೆ ನೀಡಿದ್ದರು, ಅಲ್ಲದೇ ತಿಳುವಳಿಕೆ ಒಪ್ಪಂದಗಳಿಗೆ ಸಹಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!