ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿರುವ ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಆನೆಯ ಮುಂಭಾಗ ಕಲಾವಿದೆಯೊಬ್ಬರು ನೃತ್ಯಗೈದ ವಿಡಿಯೋ ಈಗ ಮಹೀಂದ್ರ ಗ್ರೂಪ್ನ ಅಧ್ಯಕ್ಷ ಆನಂದ ಮಹೀಂದ್ರ ಅವರ ಗಮನಸೆಳೆದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಒಂದು ಅದ್ಬುತ. ಈ ದೇವಸ್ಥಾನದ ಆನೆಯು ಹೊಸ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ನಮ್ಮೆಲ್ಲರನ್ನು ಆಶೀರ್ವದಿಸಲಿ ಅಂತ ಅಂದುಕೊಳ್ಳುತ್ತೇನೆ ಎಂದಿದ್ದಾರೆ.