ಕಾವೇರಿ ಕಾವು: ಇಂದು ದಶಪಥ ಹೆದ್ದಾರಿಯಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತೆತ ಕಾವೇರಿ ಜಲ ವಿವಾದ ಮುನ್ನೆಲೆಗೆ ಬಂದಿದೆ. ಕೆಆರ್‌ಎಸ್ ಡ್ಯಾಂನಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ರೈತ ಸಂಘ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ತಡೆದು ಪ್ರತಿಭಟಿಸಲು ಮುಂದಾಗಿದ್ದಾರೆ. ಈ ಬಾರಿ ವಾಡಿಕೆಯಷ್ಟು ಮಳೆ ಬೀಳದ ಕಾರನ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಆದರೂ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ.

ರೈತರಿಗೆ ಜಲವೇ ಜೀವ, ನಮ್ಮಲ್ಲೇ ಕೊರತೆ ಇರುವಾಗ ಇನ್ನೊಂದು ರಾಜ್ಯಕ್ಕೆ ನೀರು ಬಿಡುವುದು ಸರಿಯಲ್ಲ, ಈ ಕೂಡಲೇ ನೀರು ನಿಲ್ಲಿಸದೇ ಹೋದರೆ ಹೋರಾಟ ಉಗ್ರ ರೂಪ ತಾಳಲಿದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ರೈತ ಸಂಘದ ಮೂಲ ಸಂಘಟನೆ ಮಂಡ್ಯದ ಇಂಡುವಾಳು ಸಮೀಪದ ದಶಪಥ ರಸ್ತೆಯಲ್ಲಿ ಎತ್ತಿನಗಾಡಿ, ಜಾನುವಾರುಗಳು ಹಾಗೂ ಟ್ರಾಕ್ಟರ್ ತಂದು ಪ್ರತಿಭಟನೆ ಮಾಡಲು ರೈತರು ತಯಾರಾಗಿದ್ದಾರೆ.

ಹೆದ್ದಾರಿ ತಡೆಗೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದು, ೫೦೦ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!