ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 3,000 ಕ್ಯೂಸೆಕ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಆದೇಶವನ್ನು ಖಂಡಿಸಿ, ಮಂಡ್ಯದಲ್ಲಿ ಪ್ರತಿಭಟನೆ ಮುಂದುವರಿದಿದೆ.
ಜಿಲ್ಲೆಯ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ಜೊತೆಗೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರಾಜ್ಯ ಸರಕಾರ ರಾಜ್ಯದ ಜನರಿಗೆ ಖಾಲಿ ಬಿಂದಿಗೆಯನ್ನು ಉಡುಗೊರೆಯಾಗಿ ಕೊಟ್ಟಿದೆ ಎಂದು ಆಕ್ರೋಶ ಹೊರಹಾಕಿದರು.
ಸಂಸದರ ವಿರುದ್ಧವೂ ಕಿಡಿಕಾರಿದ್ದು, ಪ್ರತಿಭಟನೆಗೆ ಕನ್ನಡಸೇನೆ ಕಾರ್ಯಕರ್ತರು ತಮ್ಮ ಸಹಮತ ವ್ಯಕ್ತಪಡಿಸಿದರು.