ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ವಿವಾದದ (Cauvery River Dispute) ವಿಚಾರದಲ್ಲಿ ಪ್ರಧಾನ ಮಂತ್ರಿಗಳು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೀರು ಹಂಚಿಕೆ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಸರ್ಕಾರ ನಮ್ಮ ನಾಡಿನ ಜನರ ರಕ್ಷಣೆಗೆ ಬೆಂಬಲ ಕೊಡಬೇಕು. ಕಾವೇರಿ, ಮಹದಾಯಿ, ಹೇಮಾವತಿ ರಕ್ಷಣೆಗೆ ನಾವು ಬದ್ಧರಾಗಿರಬೇಕು ಎಂದರು.
ಈಗ ಸುಪ್ರೀಂಕೋರ್ಟ್ಗೆ ಹೋಗುವುದರಿಂದ ಪರಿಹಾರ ಸಿಗಲಾರದು. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಕುಳಿತು ಚರ್ಚೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ ಅವರು 10,000 ಕ್ಯೂಸೆಕ್ ನೀರು ಒಳ ಹರಿವು ಇದೆ ಎಂದು ಹೇಳಿದ್ದಾರೆ. ಮೆಟ್ಟೂರು ಡ್ಯಾಮ್ನಲ್ಲಿ 11 ಟಿಎಂಸಿ ನೀರು ಇರುವ ಬಗ್ಗೆ ವರದಿ ಇದೆ. ಮೆಟ್ಟೂರು ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. ತಮಿಳುನಾಡಿನ ಮೆಟ್ಟೂರಿನಿಂದ 6500 ಕ್ಯೂಸೆಕ್ ಹೊರಹರಿವು ಇದೆ. ಕಾಂಗ್ರೆಸ್ ಈ ವಿಚಾರಗಳನ್ನು ಡೈವರ್ಟ್ ಮಾಡುವ ಕೆಲಸ ಮಾಡುತ್ತಿದೆ ಎಂದ ವಾಗ್ದಾಳಿ ನಡೆಸಿದರು.
ಸೆಪ್ಟೆಂಬರ್ 29 ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರೆ ನೀಡಲಾಗಿರುವ ಕರ್ನಾಟಕ ಬಂದ್ಗೆ ನಮ್ಮ ನಮ್ಮ ಬೆಂಬಲ ಇದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು.