ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇದಾರನಾಥದಲ್ಲಿ ಮಳೆ, ಹಿಮಪಾತವಾಗುತ್ತಿದೆ ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ಎಚ್ಚರಿಕೆ ವಹಿಸುವಂತೆ ಉತ್ತರಾಖಂಡ(Uttarakhand) ಸರ್ಕಾರ ಸೂಚನೆ ನೀಡಿದೆ. ಉತ್ತರಾಖಂಡ ಸರ್ಕಾರವು ಕೇದಾರನಾಥ ಧಾಮಕ್ಕೆ ಹೋಗುವ ಎಲ್ಲಾ ಯಾತ್ರಿಕರು ಕೇದಾರನಾಥ ಧಾಮಕ್ಕೆ ಹೋಗುವ ಮೊದಲು ಹವಾಮಾನ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಮತ್ತು ಸಾಕಷ್ಟು ಸಾಮಾನುಗಳನ್ನು ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಿದೆ.
ಪ್ರಯಾಣಿಕರು ಪ್ರಯಾಣವನ್ನು ಪ್ರಾರಂಭಿಸಿದ ತಕ್ಷಣ ಅಥವಾ ಪ್ರಯಾಣದ ಸಮಯದಲ್ಲಿ ಅನಾರೋಗ್ಯದ ಸಂದರ್ಭದಲ್ಲಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬಹುದು ಮತ್ತು ವೈದ್ಯರನ್ನು ಸಂಪರ್ಕಿಸಬಹುದು. ಯಾತ್ರೆಯನ್ನು ಸುಗಮ, ಸುರಕ್ಷಿತ ಮತ್ತು ತಡೆರಹಿತವಾಗಿ ನಡೆಸಲು ರಾಜ್ಯ ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ. ಪ್ರಯಾಣದ ವ್ಯವಸ್ಥೆಗಳನ್ನು ಉನ್ನತ ಮಟ್ಟದಲ್ಲಿ ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.
ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಮಾತನಾಡಿ, ಕೇದಾರನಾಥ ಧಾಮದಲ್ಲಿ ನಿನ್ನೆ ಭಾರೀ ಹಿಮಪಾತವಾಗಿತ್ತು, ಯಾತ್ರಾರ್ಥಿಗಳು ಎಚ್ಚರದಿಂದಿರಿ ಮತ್ತು ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಪ್ರಾರಂಭಿಸಲು ವಿನಂತಿಸಿದ್ದಾರೆ.
ಶನಿವಾರದಂದು ಅಕ್ಷಯ ತೃತೀಯ ಶುಭ ಸಂದರ್ಭದಲ್ಲಿ ಗಂಗೋತ್ರಿ-ಯಮುನೋತ್ರಿಯ ಬಾಗಿಲು ತೆರೆದ ನಂತರ, ಚಾರ್ ಧಾಮ್ನ ಯಾತ್ರೆ ಶುರುವಾಗಿದೆ. ಈ ಬಾರಿ ಚಾರ್ ಧಾಮ್ ಯಾತ್ರೆಯನ್ನು ಸುಗಮ ಹಾಗೂ ಭಕ್ತರಿಗೆ ಸುರಕ್ಷಿತವಾಗಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ.