June 21, 2026
Sunday, June 21, 2026
spot_img

ಗಡಿ ದಾಟುವ ಹಾಲಿನ ಮೇಲೂ ಹದ್ದಿನ ಕಣ್ಣು: ಕಲಬೆರಕೆ ಆಹಾರಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಸಜ್ಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಕ್ಕೆ ಹೊರ ರಾಜ್ಯಗಳಿಂದ ಬರುತ್ತಿರುವ ಹಾಲಿನ ಗುಣಮಟ್ಟದ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಗಡಿ ಭಾಗಗಳಲ್ಲೇ ಹಾಲಿನ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದ್ದು, ಕಲಬೆರಕೆ ಪತ್ತೆಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಗಡಿಗಳಲ್ಲೇ ಗುಣಮಟ್ಟ ಪರೀಕ್ಷೆ

ರಾಜ್ಯದಲ್ಲಿ ಸಾಕಷ್ಟು ಹಾಲು ಉತ್ಪಾದನೆ ಇದ್ದರೂ ಕೆಲ ಖಾಸಗಿ ಕಂಪನಿಗಳು ಹೊರ ರಾಜ್ಯಗಳಿಂದ ಹಾಲು ತರಿಸುತ್ತಿವೆ. ಹೀಗಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗಡಿ ಭಾಗಗಳಲ್ಲೇ ತಪಾಸಣೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:

ಜನೌಷಧಿ ಕೇಂದ್ರಗಳ ಪರಿಶೀಲನೆ

ಜನೌಷಧಿ ಕೇಂದ್ರಗಳ ಮೇಲೆ ದಾಳಿ ನಡೆದಿಲ್ಲ. ಅಲ್ಲಿನ ಔಷಧಿಗಳ ಗುಣಮಟ್ಟ ಪರಿಶೀಲನೆ ಮಾತ್ರ ನಡೆಯುತ್ತಿದೆ. ನಿಯಮಾನುಸಾರ ಕಾರ್ಯನಿರ್ವಹಿಸುವ ಕೇಂದ್ರಗಳು ಆತಂಕಪಡುವ ಅಗತ್ಯವಿಲ್ಲ ಎಂದು ಖಾದರ್ ಸ್ಪಷ್ಟಪಡಿಸಿದರು.

ವಿಷಕಾರಿ ಬಣ್ಣ ಬಳಕೆಗೆ ಬ್ರೇಕ್

ಕಬಾಬ್‌, ಶವರ್ಮಾ, ಗೋಬಿ ಸೇರಿದಂತೆ ಆಹಾರ ಪದಾರ್ಥಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಬಣ್ಣಗಳನ್ನು ಬಳಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಜನರ ಆರೋಗ್ಯದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಆಹಾರದ ಗುಣಮಟ್ಟ ಕಾಪಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಲಿದೆ ಎಂದು ಅವರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !