ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಮೊದಲ ರಿಯಾಕ್ಷನ್ ಕೊಟ್ಟ ಕೇಜ್ರಿವಾಲ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ 50 ದಿನಗಳಿಂದ ಜೈಲಿನಲ್ಲೇ ಇದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಶುಕ್ರವಾರ (ಮೇ 10) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಕಾರಣ ಶುಕ್ರವಾರ ಸಂಜೆ ತಿಹಾರ ಜೈಲಿನಿಂದ (Tihar Jail) ಅವರನ್ನು ಬಿಡುಗಡೆ ಮಾಡಲಾಯಿತು.

ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು.

ಜೈಲಿನಿಂದ ಬಿಡುಗಡೆಯಾದ ಬಳಿಕ ಕಾರ್ಯಕರ್ತರು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮೆರವಣಿಗೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, “ನಾನು ನಿಮಗೆಲ್ಲ ಧನ್ಯವಾದ ಹೇಳಲು ಬಯಸುತ್ತೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೂ ನಾನು ಧನ್ಯವಾದ ತಿಳಿಸುತ್ತೇನೆ. ಅವರಿಂದಾಗಿಯೇ ನಾನು ಈಗ ಜೈಲಿನಿಂದ ಬಿಡುಗಡೆಯಾಗಿದ್ದೇನೆ. ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಹೋರಾಡೋಣ” ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!