ಕೇಜ್ರಿವಾಲ್, ಮಾನ್ ಗೆ 100 ಕೋಟಿ ಮಾನನಷ್ಟ ನೊಟೀಸ್ ನೀಡಿದ ಬಿಜಿಪಿ ನಾಯಕ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ತಮ್ಮ ವಿರುದ್ಧ ಸುಳ್ಳು ಹಾಗೂ ಮಾನಹಾನಿಕಾರಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ಮಾನನಷ್ಟ ನೊಟೀಸ್ ಕಳುಹಿಸಿದ್ದಾರೆ. ಅಲ್ಲದೇ 48 ಗಂಟೆಗಳ ಒಳಗೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜನವರಿ 21 ರಂದು ಸುಳ್ಳು ತಪ್ಪುದಾರಿಗೆಳೆಯುವ ಹೇಳಿಕೆ, ಆಧಾರರಹಿತ ಟ್ವೀಟ್‌, ಮರು ಟ್ವೀಟ್‌ಗಳ ಮೂಲಕ ಮಾನಹಾನಿ ಮಾಡಿದ ಆರೋಪದ ಮೇಲೆ ಕೇಜ್ರಿವಾಲ್ ಮತ್ತು ಮಾನ್ ವಿರುದ್ಧ ನೊಟೀಸ್ ಕಳುಹಿಸಲಾಗಿದೆ.ನೊಟೀಸ್ ಸ್ವೀಕರಿಸಿದ 48 ಗಂಟೆಗಳ ಒಳಗಾಗಿ ಬೇಷರತ್ ಕ್ಷಮೆಯಾಚಿಸಬೇಕು. ಮಾನಹಾನಿ ನಷ್ಟ ಭರಿಸಲು ಇಬ್ಬರು ತಲಾ ರೂ. 50 ಕೋಟಿಯಂತೆ ರೂ. 100 ಕೋಟಿ ಪಾವತಿಸಬೇಕು. ಒಂದು ವೇಳೆ ಹಾಗೆ ಮಾಡದಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಪರ್ವೇಶ್ ವರ್ಮಾ ಅವರು ಪಂಜಾಬಿಗಳಿಂದ ದೇಶಕ್ಕೆ ಬೆದರಿಕೆ ಇದೆ ಎಂದು ಹೇಳಿರುವುದಾಗಿ ಇತ್ತೀಚಿಗೆ ಕೇಜ್ರಿವಾಲ್ ಆರೋಪಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ವರ್ಮಾ, ನಾನು ಮತ್ತು ನನ್ನ ಕುಟುಂಬದವರು ಸಿಖ್ ಸಮುದಾಯಕ್ಕಾಗಿ ಏನು ಮಾಡಿದ್ದೇವೆ ಎಂಬುದನ್ನು ಪ್ರತ್ಯೇಕವಾಗಿ ಉಲ್ಲೇಖಿಸಬೇಕಾಗಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!