ಲಾಲು ರೀತಿಯಲ್ಲಿ ದೆಹಲಿಯನ್ನು ಲೂಟಿ ಮಾಡುತ್ತಿರುವ ಕೇಜ್ರಿವಾಲ್: ಅನುರಾಗ್ ಠಾಕೂರ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೇಜ್ರಿವಾಲ್ ಅವರು ಪ್ರಸ್ತುತ ಲಾಲು ಅವರ ರೀತಿಯಲ್ಲಿ ದೆಹಲಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ಕೇಜ್ರಿವಾಲ್ ಅವರು ಚುನಾವಣೆಗಳು ಬಂದಾಗ ಮಾತ್ರ ಭಗವಾನ್ ರಾಮನನ್ನು ನೆನಪಿಸಿಕೊಳ್ಳುತ್ತಾರೆ. ಇಲ್ಲದಿದ್ದರೆ, ತುಕ್ಡೆ-ತುಕ್ಡೆ ಗ್ಯಾಂಗ್ ನಾಯಕರೊಂದಿಗೆ ಮೆರವಣಿಗೆಯಲ್ಲಿ ಇರುತ್ತಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಗೆ ಕೇವಲ ಒಂದು ದಿನ ಮುಂಚಿತವಾಗಿ, ಅನುರಾಗ್ ಠಾಕೂರ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದರು.

ಎಎಪಿ ಪಕ್ಷ ಭ್ರಷ್ಟಾಚಾರದ ಪಕ್ಷ. ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರು ಸುಳ್ಳು ಭರವಸೆಗಳನ್ನು ನೀಡಿದ್ದಾರೆ. ಯಾವುದನ್ನೂ ಜನರು ಮುಂದೆ ತರುವ ಪ್ರಯತ್ನವನ್ನು ಮಾಡಿಲ್ಲ ಎಂದು ಠಾಕೂರ್ ಹೇಳಿದರು.
ಇತ್ತೀಚೆಗೆ ಕೇಜ್ರಿವಾಲ್ ಅವರ ಪಕ್ಷದ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಾರೆ. ಕೇಜ್ರಿವಾಲ್ ಅವರ ರಾಜಕೀಯ ವಂಚಕರು, ದೆಹಲಿ ಜನರಿಗೆ ಮೋಸ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.
ಈಗಾಗಲೇ ಅವರ ಸರ್ಕಾರದ ಒದೊಂದು ಭ್ರಷ್ಟಾಚಾರದ ಸತ್ಯಗಳು ಹೊರ ಬರುತ್ತಿದೆ, ಅವರ ಸರ್ಕಾರ ಭ್ರಷ್ಟಾಚಾರದ ಮೂಲಕ ನಡೆಸುತ್ತಿದ್ದಾರೆ. ಕೇಜ್ರಿವಾಲ್ 16 ಸ್ಮಾಗ್ ಟವರ್‌ಗಳನ್ನು ಸ್ಥಾಪಿಸುವುದಾಗಿ ಹೇಳಿದರು, ಆದರೆ ಅದು ಸಾಧ್ಯವಾಗಲಿಲ್ಲ. ಎರಡನ್ನು ಸ್ಥಾಪಿಸಿ, ಅದು ಕೂಡ ಈಗ ಕಾರ್ಯನಿರ್ವಹಿಸುತ್ತಿಲ್ಲ. ನಾವು ಪಂಜಾಬ್‌ನಲ್ಲಿ ಸರ್ಕಾರವನ್ನು ರಚಿಸಿದರೆ, ಹುಲ್ಲು ಸುಡುವುದು ನಿಲ್ಲುತ್ತದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!