ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನೆಲೆಸಿರುವ ಬಾಲರಾಮನ ನೋಡಲು ಪ್ರತಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಾಲರಾಮನ ದರುಶನ ಮಾಡಲು ಬರುತ್ತಿರುತ್ತಾರೆ. ಈಗಾಗಲೇ ಹಲವು ಗಣ್ಯರು ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ಆಶೀರ್ವಾದ ಪಡೆಯುತ್ತಿದ್ದಾರೆ.
ಇದೀಗ ಅಯೋಧ್ಯೆಯ ರಾಮ ಮಂದಿರಕ್ಕೆ ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಹ ಕುಟುಂಬ ಸಮೇತರಾಗಿ ಬಾಲರಾಮನ ದರುಶನಕ್ಕೆ ಬಂದಿದ್ದಾರೆ. ಇನ್ನು ಇದೆ ವೇಳೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಅವರಿಗೆ ಸಾಥ್ ನೀಡಿದ್ದಾರೆ. ರಾಮಲಾಲ್ಲ ದರುಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.