August 19, 2026
Wednesday, August 19, 2026
spot_img

ಪ್ರತೀ ವರ್ಷವೂ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇನ್ಮುಂದೆ ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಟ್ರಂಪೆಟ್ ಸರ್ಕಲ್ ಬಳಿ ಕೆಂಪೇಗೌಡರ ಗುರುತನ್ನು ಪ್ರತಿಬಿಂಬಿಸುವ ಮತ್ತೊಂದು ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇನ್ನು ಮುಂದೆ ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ಗೆ ಸೀಮಿತ ಮಾಡೋದಿಲ್ಲ ಎಂದಿದ್ದಾರೆ.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ವರ್ಷಕ್ಕೊಂದು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ವರ್ಷ ಯಶವಂತಪುರ ಕ್ಷೇತ್ರದ ಕೆಂಪೇಗೌಡ ಲೇಔಟ್‌ನಲ್ಲಿ ಜಯಂತಿ ಆಚರಣೆ ಪ್ರಾರಂಭವಾಗಿದ್ದು, ಮುಂದಿನ 28 ವರ್ಷಗಳ ಕಾಲ ಬೇರೆ ಬೇರೆ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಮುಂದುವರಿಯಲಿದೆ. ಜಿಬಿಎ ವತಿಯಿಂದ ಇದಕ್ಕೆ ಹಣಕಾಸಿನ ವ್ಯವಸ್ಥೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !