ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 11 ರಂದು ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ, ಇದಕ್ಕೆ ಸಂಬಂಧಿಸಿದಂತ ವಿಶೇಷ ವಿಡಿಯೋವೊಂದನ್ನು ತಯಾರಿಸಿದ್ದು, ಇದಕ್ಕೆ ರಾಕಿಂಗ್ ಸ್ಟಾರ್ ಯಶ್ ಹಿನ್ನೆಲೆ ಧ್ವನಿ ನೀಡಲಿದ್ದಾರೆ.
ಕೆಂಪೇಗೌಡರ ಜೀವನ ಸಾಧನೆಯನ್ನು ಈ ವಿಶೇಷ ವಿಡಿಯೋದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಇದಕ್ಕೆ ಯಶ್ ಹಿನ್ನಲೆ ಧ್ವನಿ ನೀಡುತ್ತಿದ್ದಾರೆ ಎನ್ನಲಾಗಿದೆ.
ಎರಡು ದಿನಗಳ ಹಿಂದಷ್ಟೇ ಅಮೋಘವರ್ಷ ಹಾಗೂ ಯಶ್ ಡಬ್ಬಿಂಗ್ ಸ್ಟುಡಿಯೋ ಒಂದರಲ್ಲಿ ಕಾಣಿಸಿಕೊಂಡಿದ್ದರು. ಇಲ್ಲಿನ ಫೋಟೊ ಎಲ್ಲೆಡೆ ವೈರಲ್ ಆಗಿದ್ದು, ಚರ್ಚೆ ಆರಂಭವಾಗಿದೆ.
ಇದನ್ನು ನೋಡಿದ ಅಭಿಮಾನಿಗಳು ಗಂಧದ ಗುಡಿಯಲ್ಲಿ ಯಶ್ ಏನಾದರೂ ಸೇರಿದ್ದಾರಾ ಎಂದು ಕೇಳಿದ್ದರು. ಆದರೆ ಇದಕ್ಕೆ ಈಗ ಉತ್ತರ ಸಿಕ್ಕಂತೆ ಕಾಣುತ್ತಿದೆ.