ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಅಖಾಡಕ್ಕಿಳಿದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2019ರಲ್ಲಿ ಅಮೇಠಿಯಲ್ಲಿ ರಾಹುಲ್ ಗಾಂಧಿಯವರಿಗೆ ಅದ ಪರಿಸ್ಥಿತಿ ಈ ಬಾರಿ ವಯನಾಡಿನಲ್ಲಿ ಆಗಲಿದೆ ಎಂದು ವಯನಾಡು ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಹೇಳಿದ್ದಾರೆ.

ಕೇರಳ ಬಿಜೆಪಿಯ ರಾಜ್ಯಾಧ್ಯಕ್ಷರಾದ ಕೆ. ಸುರೇಂದ್ರನ್‌ ಅವರಿಗೆ ಬಿಜೆಪಿ ಹೈಕಮಾಂಡ್ ಭಾನುವಾರ ವಯನಾಡು ಟಿಕೆಟ್ ನೀಡಿದ್ದು, ಕಾಂಗ್ರೆಸ್‌ನ ರಾಹುಲ್ ಗಾಂಧಿ ಹಾಗೂ ಸಿಪಿಐನ ಆನಿ ರಾಜ ವಿರುದ್ಧ ಸ್ಪರ್ಧಿಸಲಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವಯನಾಡುವಿನಿಂದ ಸ್ಪರ್ಧಿಸಲು ನಮಗೆ ಹೇಳಿದ್ದಾರೆ. ಇಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಕ್ಷೇತ್ರಕ್ಕೆ ರಾಹುಲ್ ಗಾಂಧಿ ಅವರ ಕೊಡುಗೆ ಏನೂ ಇಲ್ಲ. ಕಳೆದ ಬಾರಿ ಅಮೇಠಿಯಲ್ಲಿ ಆದ ಹಾಗೆ ಈ ಬಾರಿ ಇಲ್ಲಿ ಆಗಲಿದೆ’ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!