ಹೊಸದಿಗಂತ ಡಿಜಿಟಲ್ ಡೆಸ್ಕ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸಲಿರುವ ಕಾರ್ಯಕ್ರಮಕ್ಕೆ ಆಗಮಿಸುವವರು ಯಾರೂ ಕಪ್ಪು ಬಣ್ಣದ ಉಡುಪು, ಕಪ್ಪು ಮಾಸ್ಕ್ ಧರಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.ಮಾತ್ರಲ್ಲ, ಕಪ್ಪು ಬಣ್ಣದ ಕೊಡೆ ಕೂಡ ತರುವಂತಿಲ್ಲ ಎಂದು ನಿರ್ದೇಶನ ನೀಡಲಾಗಿದೆ.
ಈಗಾಗಲೇ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಸಪ್ನಾ ಸುರೇಶ್, ಸಿಎಂ ಪಿಣರಾಯಿ ವಿಜಯನ್ ಪುತ್ರಿ ಮತ್ತು ಪತ್ನಿ ಸೇರಿ ಕುಟುಂಬಸ್ಥರ ಪಾತ್ರವಿದೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಕೇರಳದ ಕೊಝಿಕೋಡ್ನ ಕೆಥೊಲಿಕ್ ಚರ್ಚ್ನಲ್ಲಿನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆಗಮಿಸುವವರಿಗೆ ಚರ್ಚ್ನಿಂದ ಈ ಸೂಚನೆ ನೀಡಲಾಗಿದೆ.
ಸಪ್ನಾ ಸುರೇಶ್ ಪ್ರಕರಣದಲ್ಲಿ ಸಿಎಂ ವಿಜಯನ್ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಈ ಕ್ರಮಕೈಗೊಂಡಿದೆ ಎನ್ನಲಾಗಿದೆ. ಅದಕ್ಕೆ ಅನುಸಾರವಾಗಿ ಚರ್ಚ್ನ ವಾಟ್ಸ್ಆಯಪ್ ಗ್ರೂಪ್ಗಳಲ್ಲಿ ಈ ಸೂಚನೆ ಹರಿದಾಡಿದೆ.