ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದೆಲ್ಲೆಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ (BBC documentary)ಪ್ರದರ್ಶನವನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ತಿರುವನಂತಪುರಂನ ಶಾಂಘುಮುಖಂ ಬೀಚ್ನಲ್ಲಿ ಆಯೋಜಿಸಿದೆ.
ಬಿಡುಗಡೆಯಾದ ಕೆಲವೇ ದಿನಗಳಲ್ಲಿ, ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಲಿಂಕ್ಗಳನ್ನು ಹಂಚಿಕೊಳ್ಳುವ ಬಹು ಯೂಟ್ಯೂಬ್ ವಿಡಿಯೋಗಳು ಮತ್ತು ಟ್ವಿಟರ್ ಪೋಸ್ಟ್ಗಳನ್ನು ನಿರ್ಬಂಧಿಸಲು ಕೇಂದ್ರವು ನಿರ್ದೇಶನಗಳನ್ನು ನೀಡಿತ್ತು.ಸರ್ಕಾರದ ಕ್ರಮಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಒಳಗಾಗಿದೆ.
ಏತನ್ಮಧ್ಯೆ, ಹೈದರಾಬಾದ್ ವಿಶ್ವವಿದ್ಯಾನಿಲಯ, ಜೆಎನ್ಯು ಮತ್ತು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಪಂಜಾಬ್ ವಿಶ್ವವಿದ್ಯಾನಿಲಯ ಸೇರಿದಂತೆ ಭಾರತದಾದ್ಯಂತ ಹಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದವು. ಸ್ಕ್ರೀನಿಂಗ್ ವೇಳೆ ಜೆಎನ್ಯು ಮತ್ತು ಜಾಮಿಯಾದಲ್ಲಿ ಗದ್ದಲ ಮತ್ತು ಹಿಂಸಾಚಾರಕ್ಕೆ ಕಾರಣವಾಗಿತ್ತು.
ಇದೀಗ, ಇಂದು ತಿರುವನಂತಪುರಂನ ಕಡಲತೀರದಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕೆಪಿಸಿಸಿ ಘೋಷಿಸಿದೆ.