ಪಿಎಫ್ಐ ಕಾರ್ಯಕರ್ತರಿಗೆ ಅಗ್ನಿಶಾಮಕ ತರಬೇತಿ ನೀಡಿದ ಅಧಿಕಾರಿಗಳ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್

ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ರಕ್ಷಣಾ ಮತ್ತು ಪರಿಹಾರ ತಂಡಕ್ಕೆ ಅಗ್ನಿಶಾಮಕ ತರಬೇತಿ ನೀಡಿದ ಇಬ್ಬರು ಅಗ್ನಿಶಾಮಕ ಸುರಕ್ಷತಾ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಮೂವರನ್ನು ವರ್ಗಾವಣೆ ಮಾಡಲಾಗಿದೆ.

ಎರ್ನಾಕುಲಂ ಪ್ರಾದೇಶಿಕ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ವಿಚಾರಣೆಗೆ ಬಾಕಿಯಿರುವ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

ತರಬೇತಿ ನಿಷೇಧಿಸಿ ಸುತ್ತೋಲೆ
ಕೇರಳ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಮಹಾನಿರ್ದೇಶಕರು ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಿಗೆ ರಕ್ಷಣಾ ತರಬೇತಿ ಕಾರ್ಯಕ್ರಮಗಳನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿದ್ದಾರೆ. ಯಾವುದೇ ಇಲಾಖೆ ಅಥವಾ ಸಿಬ್ಬಂದಿ ಇಂತಹ ತರಬೇತಿ ನೀಡಿದರೆ ಕರ್ತವ್ಯಲೋಪ ಎಂದು ಪರಿಗಣಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಇತ್ತೀಚೆಗೆ ಪಿಎಫ್ಐ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳು ನೀಡಿದ ತರಬೇತಿಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದರಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಿದೆ.

ರಾಜ್ಯ ಅಗ್ನಿಶಾಮಕ ಮತ್ತು ಸುರಕ್ಷತಾ ಮುಖ್ಯಸ್ಥೆ ಬಿ.ಸಂಧ್ಯಾ ಅವರು ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳ ಭಾಗಗಳಲ್ಲಿ ಲೋಪದೋಷಗಳ ಕುರಿತು ಸರಕಾರಕ್ಕೆ ವರದಿ ಸಲ್ಲಿಸಿದ ನಂತರ ಈ ಪ್ರಕ್ರಿಯೆ ನಡೆದಿದೆ. ಮಾ. 30ರಂದು ಎರ್ನಾಕುಲಂ ಜಿಲ್ಲೆಯ ಆಲುವಾದಲ್ಲಿ ಪಿಎಫ್ಐನ ರಕ್ಷಣಾ ಮತ್ತು ಪರಿಹಾರ ತಂಡಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಅಗ್ನಿಶಾಮಕ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ನೀಡಿದ ಘಟನೆಯ ನಂತರ ಬಿ.ಸಂಧ್ಯಾ ಅಧಿಕಾರಿಗಳಿಂದ ವರದಿ ಕೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!