ಹೊಸ ದಿಗಂತ ಡಿಜಿಟಲ್ ಡೆಸ್ಕ್:
‘ದೇವರ ಸ್ವಂತ ನಾಡು’ ಕೇರಳದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಇನ್ನಷ್ಟು ಬಿರುಸಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕೇರಳದ ಕಾಸರಗೋಡು, ಕೋಝಿಕ್ಕೋಡ್, ಕಣ್ಣೂರು, ವಯನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹೆಚ್ಚಿನ ಎಚ್ಚರಿಕೆಯಲ್ಲಿರುವಂತೆ ಜನತೆಗೆ ಆಡಳಿತ ಸೂಚಿಸಿದೆ.
ಮಳೆಯೊಂದಿಗೆ ಗಾಳಿಯ ಅಬ್ಬರವೂ ಇರಲಿದ್ದು, ಸುಮಾರು 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಜನತೆ ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯದಂತೆ ಮೀನುಗಾರರು, ಪ್ರವಾಸಿಗರಿಗೂ ನಿರ್ದೇಶನ ನೀಡಲಾಗಿದೆ.