ದೇವರ ನಾಡಿಗೆ ಮತ್ತಷ್ಟು ಮಳೆ: ನಾಗರಿಕರಿಗೆ ಏನಿದೆ ಹೊಸ ‘ಅಲರ್ಟ್’?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

‘ದೇವರ ಸ್ವಂತ ನಾಡು’ ಕೇರಳದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಇನ್ನಷ್ಟು ಬಿರುಸಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಕೇರಳದ ಕಾಸರಗೋಡು, ಕೋಝಿಕ್ಕೋಡ್, ಕಣ್ಣೂರು, ವಯನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹೆಚ್ಚಿನ ಎಚ್ಚರಿಕೆಯಲ್ಲಿರುವಂತೆ ಜನತೆಗೆ ಆಡಳಿತ ಸೂಚಿಸಿದೆ.

ಮಳೆಯೊಂದಿಗೆ ಗಾಳಿಯ ಅಬ್ಬರವೂ ಇರಲಿದ್ದು, ಸುಮಾರು 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಜನತೆ ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯದಂತೆ ಮೀನುಗಾರರು, ಪ್ರವಾಸಿಗರಿಗೂ ನಿರ್ದೇಶನ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!