ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಲಕ್ಕಾಡ್ನ ವಡಕ್ಕೆಂಚೇರಿ ಸಮೀಪದ ಮಂಗಳಂನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕೊಂಡೊಯ್ದಿದ್ದ ಬಸ್ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿರುವುದಾಗಿ ಕೇರಳ ಸಚಿವ ಎಂ.ಬಿ.ರಾಜೇಶ್ ತಿಳಿಸಿದರು.
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ಗೆ ಪ್ರವಾಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಭೀಕರ ದುರಂತ ಸಂಭವಿಸಿದೆ. ಬಸೆಲಿಯೋಸ್ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಹೊತ್ತ ಟೂರಿಸ್ಟ್ ಬಸ್ ಎರ್ನಾಕುಲಂನಿಂದ ಊಟಿಗೆ ಹೊರಟಿತ್ತು. ಕೆಎಸ್ಆರ್ಟಿಸಿ ಬಸ್ ಕೊಯಮತ್ತೂರಿಗೆ ತೆರಳುತ್ತಿತ್ತು.
ಮೃತರಲ್ಲಿ ಐವರು ವಿದ್ಯಾರ್ಥಿಗಳು, ಒಬ್ಬರು ಶಿಕ್ಷಕರು ಹಾಗೂ ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಮೂವರು ಪ್ರಯಾಣಿಕರು ಸೇರಿದ್ದಾರೆ. ಗಾಯಗೊಂಡ ಒಟ್ಟು 38 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರಿಗೆ ಗಂಭೀರ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.