ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಕೆಜಿಎಫ್ ಬಾಬು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಟಿಕೆಟ್​ ಕೈ ತಪ್ಪಿರುವ ಕಾರಣ ಕೆಜಿಎಫ್‌ ಬಾಬು ಅಲಿಯಾಸ್ ಯೂಸುಫ್ ಶರೀಫ್ ಬಾಬು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ
ಅವರಿಗೆ ಟಿಕೆಟ್​​ ಕೈತಪ್ಪಿದ್ದರಿಂದ ಕಾಂಗ್ರೆಸ್​ಗೆ ಗುಡ್​ ಬೈ ಹೇಳಿದ್ದಾರೆ.

ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಕೆಜಿಎಫ್​ ಬಾಬು, “ಇತ್ತೀಚೆಗೆ ನಡೆದ ಕೆಲ ಬೆಳವಣಿಗೆಗಳ ಕಾರಣ ಅಸಮಾಧಾನಗೊಂಡು ಪಕ್ಷ ಬಿಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಐಟಿ ಅಧಿಕಾರಿಗಳು, ಜಿಎಸ್​ಟಿ ಅಧಿಕಾರಿಗಳು, ಚುನಾವಣಾ ಅಧಿಕಾರಿಗಳು, ಮುಂತಾದವರು ಕೆಜಿಎಫ್‌ ಬಾಬು ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ಸಂದರ್ಭ ಅಪಾರ ಪ್ರಮಾಣದಲ್ಲಿ ಸೀರೆಗಳು,ಗಿಫ್ಟ್‌ಗಳು, ಗುರುತಿನ ಚೀಟಿ ಪತ್ತೆಯಾಗಿದ್ದವು. ಮೇಲ್ನೋಟಕ್ಕೆ ಅಕ್ರಮ ಎಸಗಿರುವ ಶಂಕೆ ಹಿನ್ನೆಲೆಯಲ್ಲಿ ತನಿಖೆ ಶುರುವಾಗಿತ್ತು. ಈ ಘಟನೆ ನಡೆದ ಬಳಿಕ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಕೆಜಿಎಫ್​ ಬಾಬು ರಾಜೀನಾಮೆ ಕೊಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!