ಬ್ಯಾಂಕ್ ಗೆ ಕನ್ನ ಹಾಕಿದ ಖದೀಮರು: ಲಾಕರ್ ಕೊರೆದು ನಗದು ಸಹಿತ ಚಿನ್ನ ಕಳವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಹೊರವಲಯದ ಕಲ್ಲಡ್ಕ – ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಅಡ್ಯನಡ್ಕದಲ್ಲಿ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ಗುರುವಾರ ಬೆಳಗ್ಗೆ ಕಚೇರಿಯನ್ನು ತೆರೆಯುವ ಸಂದರ್ಭದಲ್ಲಿ ಹಿಂಬಾಗಿಲ ಕಿಟಕಿ ಮೂಲಕ ಒಳನುಸುಳಿದ ದರೋಡೆಕೋರರ ತಂಡ ಸೇಫ್ ಲಾಕರ್ ಬಾಗಿಲು ಕೊರೆದಿರುವುದು ನಗದು ಸಹಿತ ಲಾಕರ್ ನಲ್ಲಿಟ್ಟ ಚಿನ್ನವನ್ನು ದೋಚಿದ ಕೃತ್ಯ ಬೆಳಕಿಗೆ ಬಂದಿದೆ.

ಅಡ್ಯನಡ್ಕ ಶಾಖೆಯ ಹಿಂಭಾಗದಲ್ಲಿ ಕಾಡಿದ್ದು, ಈ ದಾರಿಯನ್ನು ಬಳಸಿದ ತಂಡ ಕಿಟಕಿಯ ೮ ಸರಳುಗಳನ್ನು ಕಬ್ಬಿಣ ತುಂಡಸಿಸುವ ಗರಗಸ ಬಳಸಿ ತುಂಡರಿಸಲಾಗಿದೆ. ಬಳಿಕ ಇಬ್ಬರು ಒಳಗೆ ಹೋಗಿರುವ ಬಗ್ಗೆ ಸುಳಿವು ಮತ್ತೆಯಾಗಿದ್ದು, ಸೇಫ್ ಲಾಕರ್ ಬಾಗಿಲನ್ನು ಗ್ಯಾಸ್ ಕಟ್ಟರು ಬಳಸಿ ತುಂಡರಿಸಿ ನಗದು ದೋಚಿದ್ದಾರೆ. ಗ್ರಾಹಕರ ವೈಯಕ್ತಿಕ ಲಾಕರ್ ಪೈಕಿ ಕೆಲವನ್ನು ತೆರೆಯುವಲ್ಲಿ ತಂಡ ಯಶಸ್ವಿಯಾಗಿದೆ ಎಂಬ ಮಾಹಿತಿಯಿದೆ.

ಅಡ್ಯನಡ್ಕ ಪೇಟೆಯಲ್ಲಿ ಸುಮಾರು ೧೧ ಗಂಟೆಯವರೆಗೂ ಜನ ಸಂಚಾರ ಇದ್ದು, ಆ ಸಮಯದ ಬಳಿಕ ತಂಡ ಆಗಮಿಸಿರಬಹುದೆಂದು ಹೇಳಲಾಗುತ್ತಿದೆ. ಗುರುವಾರ ಬೆಳಿಗ್ಗೆ ೯.೩೦ ರ ಸುಮಾರಿಗೆ ಬ್ಯಾಂಕ್ ಸಿಬ್ಬಂದಿಗಳು ಬ್ಯಾಂಕ್ ಗೆ ಬಂದ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಅಂದಾಜು ಪ್ರಕಾರ ಲಾಕರ್ ಒಳಗಿದ್ದ ೧೬ ಲಕ್ಷ ನಗದು ಹಾಗೂ ಕೆಲವು ವೈಯಕ್ತಿಕ ಲಾಕರ್ ಗಳನ್ನು ಕಳ್ಳರು ತೆರೆದು ಅದರಲ್ಲಿದ್ದ ಚಿನ್ನಾಭರಣವನ್ನು ದೋಚುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ೧೨.೩೦ಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಆಗಮಿಸಿದೆ. ಚಿನ್ನಾಭರಣ ಅಡವು ಸಾಲ ನೀಡಿದ ಚಿನ್ನ ಭದ್ರವಾಗಿದೆ ಎಂಬ ಮಾಹಿತಿಯನ್ನು ಬ್ಯಾಂಕ್ ಅಧಿಕಾರಿಗಳು ನೀಡಿದ್ದಾರೆ.

ಕೋಟ್ಯಾಂತರ ಮೌಲ್ಯದ ಚಿನ್ನಾಭರಣಗಳು ವೈಯಕ್ತಿಕ ಲಾಕರ್ ಗಳಲ್ಲಿ ಇತ್ತೆನ್ನಲಾಗಿದ್ದು, ಹಲವು ಮಂದಿ ಗ್ರಾಹಕರು ಬ್ಯಾಂಕ್ ದರೋಡೆ ವಿಚಾರ ಹೊರಬರುತ್ತಿದ್ದಂತೆ ಬ್ಯಾಂಕ್ ಮುಂದೆ ಬರಲಾರಂಭಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣೆಯ ಅಧಿಕಾರಿಗಳು ಆಗಮಿಸುವ ಜತೆಗೆ ಪೊಲೀಸ್ ಅಧೀಕ್ಷಕ ರಿಷ್ಯಂತ್ ಆಗಮಿಸಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೇಫ್ ಲಾಕರ್ ಬಾಗಿಲು ತೆರೆಯುವ ಸಂದರ್ಭದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ, ತಕ್ಷಣ ರಕ್ಷಣಾ ಅಲರಾಂ ಮೊಳಗಬೇಕಾಗಿತ್ತು. ಆದರೆ ಕೆಲವು ಗಂಟೆಗಳ ಕಾಲ ಬ್ಯಾಂಕ್ ಒಳಗೆ ಇರುವ ಮೂಲಕ ಭದ್ರತಾ ವ್ಯವಸ್ಥೆಗೇ ಸವಾಲು ಹಾಕಿದ್ದಾರೆ. ತಂತ್ರಜ್ಞಾನ ಇದು ಮೊಳಗದಂತೆ ಮಾಡಲು ಯಾವ ವ್ಯವಸ್ಥೆಯನ್ನು ಬಳಸಿದ್ದಾರೆ ಎಂಬದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!