ಖರ್ಗೆಗೆ ಪದೇ ಪದೇ ಅಪಮಾನ ಆಗ್ತಿದೆ: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ಪದೇ ಪದೇ ನಿಂದಿಸುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಕಾಂಗ್ರೆಸ್ ದಲಿತರ ವಿರೋಧಿ. ವಯನಾಡ್‌ನಲ್ಲಿ ಪ್ರಿಯಾಂಕಾ ವಾದ್ರಾ ನಾಮಪತ್ರ ಸಲ್ಲಿಕೆ ವೇಳೆ ಖರ್ಗೆಯವರನ್ನ ಬಾಗಿಲ ಬಳಿ ನಿಲ್ಲಿಸಿದ್ದರು. ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ರಾಹುಲ್ ಗಾಂಧಿ ಬಂದ ಸಮಯದಲ್ಲಿ ಡಿ.ಕೆ ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆ ಅವರನ್ನ ತಳ್ಳೋ ಕೆಲಸ ಮಾಡಿದ್ದಾರೆ.

ಇದನ್ನು ನೋಡಿದ್ರೆ ಕಾಂಗ್ರೆಸ್ ದಲಿತ ವಿರೋಧಿಗಳು ಎಂದು ಗೊತ್ತಾಗುತ್ತದೆ. ಖರ್ಗೆ ಅವರನ್ನು ಸಿಎಂ ಮಾಡಲಿಲ್ಲ. ಯಾಕೆ ಮಾಡಲಿಲ್ಲ? ದಲಿತರನ್ನ ಅಪಮಾನ ಮಾಡೋದು ಕಾಂಗ್ರೆಸ್ ಗುಣ ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!