ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ಮುಂದುವರೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರದಲ್ಲಿ ಭದ್ರತಾ ವೈಫಲ್ಯದಂತಹ ಘಟನೆಗಳು ನಡೆಯುತ್ತಿವೆ. ನಿನ್ನೆ ರಾಹುಲ್ ಗಾಂಧಿ ಕಾಶ್ಮೀರಕ್ಕೆ ಪಾದಯಾತ್ರೆ ನಡೆಸಿದ ಹಿನ್ನಲೆಯಲ್ಲಿ ಮತ್ತೊಮ್ಮೆ ಭದ್ರತಾ ವೈಫಲ್ಯದಿಂದಾಗಿ ಪಾದಯಾತ್ರೆಯನ್ನು ಕೆಲಕಾಲ ತಡೆ ಹಿಡಿಯಲಾಗಿತ್ತು.
ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಕಾಶ್ಮೀರದಲ್ಲಿ ಭಾರತದ ಜೋಡೋ ಯಾತ್ರೆಯ ಭದ್ರತೆಗೆ ಮಧ್ಯಸ್ಥಿಕೆ ವಹಿಸುವಂತೆ ಕೇಳಿದ್ದಾರೆ. ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಈ ಯಾತ್ರೆಯಲ್ಲಿ ಜನ ದೊಡ್ಡ ಮಟ್ಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿದೆ.
ಇನ್ನೆರೆಡು ದಿನಗಳಲ್ಲಿ ಶ್ರೀನಗರದಲ್ಲಿ ಬಹಿರಂಗ ಸಭೆ ಆಯೋಜಿಸಲಾಗುತ್ತಿದೆ. ಹಲವು ಕಾಂಗ್ರೆಸ್ ಮುಖಂಡರು ಹಾಗೂ ಇತರೆ ಪಕ್ಷದ ಮುಖಂಡರು ಉಪಸ್ಥಿತರಿದ್ದು ಸೂಕ್ತ ಭದ್ರತೆ ಕೈಗೊಳ್ಳಬೇಕು ಎಂದರು. ಭದ್ರತೆ ವಿಚಾರದಲ್ಲಿ ವೈಯಕ್ತಿಕವಾಗಿ ಮಧ್ಯಪ್ರವೇಶಿಸುವಂತೆ ಕೋರಲಾಗಿದೆ. ನಿನ್ನೆ ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯದಿಂದ ಈ ಪತ್ರ ಬರೆಯುತ್ತಿರುವುದಾಗಿ ಹೇಳಿದ್ದಾರೆ. ಇದೇ ವೇಳೆ ಕನ್ಯಾಕುಮಾರಿಯಿಂದ ಆರಂಭವಾದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಶ್ರೀನಗರ ಸಭಾಭವನದಲ್ಲಿ ಕೊನೆಗೊಳ್ಳಲಿದೆ.