ಕಾಂಗ್ರೆಸ್ ಗೆ ಸಂಕಷ್ಟ ತಂದ ಖಟಾಖತ್ ಯೋಜನೆ: 136 ಸಂಸದರ ಪ್ರಮಾಣ ವಚನ ಸ್ವೀಕಾರ ತಡೆಹಿಡಿಯಲು ರಾಷ್ಟ್ರಪತಿಗೆ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಿಳಾ ಮತದಾರರಿಗೆ ಪ್ರತಿ ತಿಂಗಳು 8,500 ರೂ. ನೀಡುವುದಾಗಿ ರಾಹುಲ್ ಗಾಂಧಿ ನೀಡಿದ್ದ ಭರವಸೆ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಸಂಕಷ್ಟಕ್ಕೆ ದಾರಿ ಮಾಡಿಕೊಟ್ಟಿದೆ.

ದೆಹಲಿ ಮೂಲದ ಸುಪ್ರೀಂ ಕೋರ್ಟ್ ವಕೀಲ ವಿಭೋರ್ ಆನಂದ್ ಅವರು ಗಾಂಧಿ ಕುಟುಂಬದ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಲಂಚದ ಆರೋಪ ಹೊರಿಸಿದ್ದು, ವಿರೋಧ ಪಕ್ಷದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಡೆ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಜೂನ್ 24ರಂದು ಲೋಕಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಘೋಷಿಸಿದ್ದಾರೆ. ಈ ಮೂಲಕ ಹೊಸದಾಗಿ ಚುನಾಯಿತರಾದ ಸಂಸದರು ಪ್ರಮಾಣ ವಚನ ಬೋಧಿಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್‌ನ 99 ಸಂಸದರು ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) 37 ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ತಡೆಹಿಡಿಯಬೇಕು, ಏಕೆಂದರೆ ಅವರ ಅನರ್ಹತೆಯ ಮನವಿಯು ರಾಷ್ಟ್ರಪತಿ ಬಳಿ ಬಾಕಿ ಉಳಿದಿದೆ ಎಂದು ತಿಳಿಸಲಾಗಿದೆ.

ವಕೀಲರ ಪ್ರಕಾರ, ಕಾಂಗ್ರೆಸ್‌ನ ಖಟಾಖತ್ ಯೋಜನೆ ಮತ್ತು ಗ್ಯಾರಂಟಿ ಕಾರ್ಡ್‌ಗಳ ವಿತರಣೆಯು ಮತದಾರರಿಗೆ ಲಂಚ ನೀಡುತ್ತಿದೆ. ಇತ್ತೀಚೆಗಷ್ಟೇ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಸೆಕ್ಷನ್ 123(1)ರ ಅಡಿಯಲ್ಲಿ ಕಾಂಗ್ರೆಸ್ ಅಪರಾಧ ಮಾಡಿದೆ. ಇದು ಮತದಾರರಿಗೆ ಲಂಚ ನೀಡುವ ಏಕೈಕ ಉದ್ದೇಶದಿಂದ ಸಂಪೂರ್ಣ ಭ್ರಷ್ಟ ಆಚರಣೆಗಳಿಗೆ ಸಮಾನವಾಗಿದೆ ಎಂದು ಆನಂದ್ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!