ರಾತ್ರಿ ವೇಳೆ ಮನೆಗೆ ನುಗ್ಗಿದ ಖತರ್ನಾಕ್​ ಕಳ್ಳರು: ಚಿನ್ನ ಕದ್ದು ಎಸ್ಕೇಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸಿಕ್ಕಿದ್ದನ್ನೆಲ್ಲಾ ದೋಚಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಗ್ರಹಾರದಲ್ಲಿ ನಡೆದಿದೆ. ಗೋಡಂಬಿ ವ್ಯಾಪಾರಿ ಪ್ರಭಲಾಂಬ ಎನ್ನುವವರು ತಮ್ಮ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಸಂಬಂಧಿಕರ ಮನೆಗೆ ತೆರಳಿದ್ದಾಗ ಕಳ್ಳರು ಕೈಚಳಕ ತೋರಿಸಿದ್ದಾರೆ.

ಕಳ್ಳರು ರಾತ್ರಿ ಮನೆಗೆ ನುಗ್ಗಿ ಬೀರ್‌ನಲ್ಲಿದ್ದ 1.5 ಲಕ್ಷ ನಗದು, 300 ಗ್ರಾಂ ಚಿನ್ನಾಭರಣ ಮತ್ತು 2.5 ಗ್ರಾಂ ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ. ಮರುದಿನ ಸಂಜೆ ಮನೆಯವರು ಮನೆಗೆ ಹಿಂತಿರುಗಿದಾಗ ಮನೆ ಒಡೆದು ಹೋಗಿರುವುದು ಗೊತ್ತಾಯಿತು.

ಚಿಂತಾಮಣಿನಗರ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದರೋಡೆ ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!