ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು.
ತಮಿಳುನಾಡಿಗೆ ನೀರು ಬಿಡದಂತೆ ಘೋಷಣೆ ಕೂಗುತ್ತಾ ಕೈಯಲ್ಲಿ ಕನ್ನಡದ ಬಾವುಟಗಳನ್ನಿಡಿದು, ದೇವನಹಳ್ಳಿಯ ಕೆಐಎಎಲ್ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಬಂದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ಪೊಲೀಸರ ವಶದಲ್ಲಿದಲ್ಲಿದ್ದಾರೆ.