ದರ್ಶನ್‌ ಬಂಧನ ವಿಚಾರದಲ್ಲಿ ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ ಕುರಿತು ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರೋ ಅದರಿಂದಲೇ ನಾನು ತಿಳಿದುಕೊಳ್ಳುತ್ತಿದ್ದೇನೆ. ಸತ್ಯಾಂಶ ಹೊರತರಬೇಕು ಅನ್ನೋ ನಿಟ್ಟಿನಲ್ಲಿ ಮಾಧ್ಯಮಗಳು, ಪೊಲೀಸರು ತುಂಬಾ ಒಳ್ಳೆ ಕೆಲಸ ಮಾಡುತ್ತಿದ್ದಾರೆ.

ಸಿಎಂ ಅವರು ಹಠ ಹಿಡಿದು ಕುಳಿತಿದ್ದಾರೆ ಅಂದ್ರೆ, ಸರಿಯಾದ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಅಂತ ಅರ್ಥ. ನಾನು ಅವರ ಪರ ಇವರ ಪರ ಮಾತಾಡೋದಿಲ್ಲ. ಒಟ್ಟಿನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ, ಅವ್ರ ಪತ್ನಿ, ಮಗುವಿಗೆ ನ್ಯಾಯ ಸಿಗಬೇಕು, ಚಿತ್ರರಂಗಕ್ಕೆ ನ್ಯಾಯ ಸಿಗಬೇಕು ಎಂದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!