ಕಿಡ್ನ್ಯಾಪ್​ ಕೇಸ್​​: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಕೊನೆಗೂ ಮಧ್ಯಂತರ ಜಾಮೀನು ಸಿಕ್ಕಿದೆ.

ಇಂದು ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚಿಸಿದೆ. ಕೋರ್ಟ್ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಲಾಗಿದೆ.

ಭವಾನಿ ಅವರನ್ನು ಎಸ್‌ಐಟಿ ಬಂಧಿಸಬಾರದು.,ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ. ಈ ಷರತ್ತನ್ನು ಅನ್ವಯಿಸಿ ಮಧ್ಯಂತರ ಜಾಮೀನನ್ನು ಮಂಜೂರು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!