ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಿರುವ ಎಸ್ಐಟಿ ಅಧಿಕಾರಿಗಳು ವಿಚಾರಣೆ ಮಾಡಲಾಗಿದೆ. ನಿನ್ನೆ ರಾತ್ರಿ ರೇವಣ್ಣಗೆ ಪ್ರಶ್ನೆಗಳ ಮಳೆ ಸುರಿಸಲಾಗಿದ್ದು ಎಸ್ಐಟಿ ಪ್ರಶ್ನೆಗೆ ರೇವಣ್ಣ ಸರಿಯಾಗಿ ಉತ್ತರ ನೀಡಿಲ್ಲ ಹೇಳಲಾಗಿದೆ.
ಇತ್ತ ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆ ಮಹಿಳೆಯನ್ನು ವಿಚಾರಣೆ ಮಾಡಲಾಗಿದ್ದು, ಸರಿಯಾಗಿ ಸ್ಪಂದಿಸುತ್ತಿಲ್ಲ. ಎಸ್ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅವರಲ್ಲಿ ಒಬ್ಬರು ನಾನು ಅವಳನ್ನು ಅಪಹರಿಸಿಲ್ಲ ಎಂದು ಹೇಳಿದರೆ, ಇನ್ನೊಬ್ಬರು ಸ್ಥಳೀಯ ನಿವಾಸಿಗಳು ಬಂದು ಅವಳನ್ನು ಕರೆದೊಯ್ದರು ಎಂದು ಹೇಳುತ್ತಾರೆ. ಆದ್ದರಿಂದ ಸಂತ್ರಸ್ತರ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳಲ್ಲಿ ಗೊಂದಲವಿದೆ.