ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕ ಲೋಕೇಶ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಹಲವಾರು ಲೋಪದೋಷಗಳಿಂದ ಅವರನ್ನು ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಲೋಕೇಶ್ ಅವರ ಸ್ಥಾನಕ್ಕೆ ಡಾ.ಸೈಯದ್ ಅಲ್ತಾಫ್ ನೇಮಕಗೊಂಡಿದ್ದಾರೆ.
ಔಷಧಗಳ ಟೆಂಡರ್ನಲ್ಲಿ ಹಲವು ಲೋಪದೋಷ ಕಂಡುಬಂದಿದೆ. ಮತ್ತು ವಾದ-ವಿವಾದಗಳು, ಅಸಮರ್ಪಕ ಚಿಕಿತ್ಸೆ ಮತ್ತು ಅನಾರೋಗ್ಯದ ಸರಣಿಯ ನಡುವೆ ಲೋಕೇಶ್ ಅವರನ್ನು ಎತ್ತಂಗಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.