ಪಾಪ ಹೆಚ್ಚಾದಾಗ ಸಂಹಾರ ನಿಶ್ಚಿತ, ಶಿವ ಕೂಡಾ ನಿಮ್ಮನ್ನು ಕಾಪಾಡಲಿಲ್ಲ: ಉದ್ಧವ್ ವಿರುದ್ಧ ಕಂಗನಾ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬಾಲಿವುಡ್ ನಟಿ ಕಂಗನಾ ರಣಾವತ್​, ಅಘಾಡಿ ಸರ್ಕಾರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇನ್​​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ‘ಪಾಪ ಹೆಚ್ಚಾದಾಗ ಸಂಹಾರವಾಗುತ್ತದೆ, ಶಿವಸೇನೆಯೇ ಹನುಮಾನ್​ ಚಾಲೀಸಾ​​ ನಿಷೇಧಿಸಿತ್ತು. ಇದೀಗ ಶಿವ ಕೂಡಾ ಅವರನ್ನು ಕಾಪಾಡಲಿಲ್ಲ. ಹರಹರ ಮಹದೇವ್. ಅಧಿಕಾರದ ಅಹಂಕಾರದಲ್ಲಿ ಮೆರೆದರೆ ಅಂಥವರ ಪ್ರತಿಷ್ಠೆ ನುಚ್ಚುನೂರಾಗುತ್ತದೆ ಎಂದು ನಾನು 2020ರಲ್ಲೇ ಹೇಳಿದ್ದೆ. ಇದೀಗ ಅದು ನಿಜವಾಗಿದೆ. ಪ್ರಜಾಪ್ರಭುತ್ವ ಎಂಬುದು ಒಂದು ವಿಶ್ವಾಸ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2020ರಲ್ಲಿ ಕಂಗನಾ ರಣಾವತ್​ ಅವರ ನಿವಾಸವನ್ನು ಉದ್ಧವ್ ಠಾಕ್ರೆ ಸರ್ಕಾರ ತೆರವುಗೊಳಿಸಿತ್ತು. ಅಕ್ರಮ ಹಾಗೂ ಕಾನೂನುಬಾಹಿರವಾಗಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿತ್ತು. ಆ ಸಂದರ್ಭದಲ್ಲಿ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದ ಕಂಗನಾ, ನಿಮ್ಮ ಗರ್ವ ಮುರಿದುಹೋಗಲಿದೆ ಎಂದು ಕೋಪಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!