ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಖಂಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆ ಅತ್ಯಂತ ಹೇಯ ಕೃತ್ಯ. ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಅನ್ಯ ಧರ್ಮದ
ಯುವಕನ ಕೊಲೆಯಾಗಿತ್ತು. ಆ ಕೊಲೆಗೆ ಪ್ರತಿಕಾರವಾಗಿ ಈ ಕೊಲೆ ನಡೆದ ಶಂಕೆಯಿದೆ. ಇದು ಖಂಡನೀಯ. ಕೊಲೆಗೆ ಕೊಲೆ ಪ್ರತಿಕಾರವಲ್ಲ. ಸರ್ಕಾರ ಹತ್ಯೆ ನಡೆಸಿದ ದುಷ್ಕರ್ಮಿಗಳ ಮಟ್ಟ ಹಾಕಲಿ ಎಂದು ಟ್ವೀಟ್ ಮಾಡಿದ್ದಾರೆ.