ಹೊಸದಿಗಂತ ಮಂಗಳೂರು:
ತೀವ್ರ ಕುತೂಹಲ ಕೆರಳಿಸಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ 18 ಕ್ಷೇತ್ರಗಳ ಚುನಾವಣಾ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ. ಒಟ್ಟು 18 ಸ್ಥಾನಗಳಲ್ಲಿ ಬಿಜೆಪಿ 10 ಕ್ಷೇತ್ರಗಳನ್ನು ಗೆದ್ದುಕೊಂಡರೆ, ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿಗಳು (10 ಸ್ಥಾನ)
ಕಟೀಲು ವಲಯ: ಪದ್ಮಲತಾ ರಾವ್, ಲೋಕಯ್ಯ ಸಾಲಿಯಾನ್, ಶೈಲೇಶ್ ಅಂಚನ್, ಗುರುರಾಜ್ ಮಲ್ಲಿಗೆಯಂಗಡಿ.
ತಾಳಿಪಾಡಿ ವಲಯ: ಗೋಪಾಲ ಪುನರೂರು (ವಾರ್ಡ್ 11), ಧನುಷ್ ಶೆಟ್ಟಿಗಾರ್ (ವಾರ್ಡ್ 12), ಮಲ್ಲಿಕಾ ಗುತ್ತಗಾಡು (ವಾರ್ಡ್ 15).
ಇತರೆ ವಾರ್ಡ್ಗಳು: ಮಲ್ಲಿಕಾ ಪ್ರಕಾಶ್ (ಕಿಲೆಂಜೂರು ವಾರ್ಡ್ 5), ದಾಮೋದರ್ ಶೆಟ್ಟಿ (ವಾರ್ಡ್ 6), ಪ್ರಣಿಕ್ (ವಾರ್ಡ್ 16).
ಕಾಂಗ್ರೆಸ್ ಅಭ್ಯರ್ಥಿಗಳು (8 ಸ್ಥಾನ):
ತಾಳಿಪಾಡಿ/ಕಿನ್ನಿಗೋಳಿ ವಲಯ: ಸುನೀತಾ ರೊಡ್ರಿಗಸ್ (ವಾರ್ಡ್ 13), ಸಂತಾನ್ ಡಿಸೋಜ (ವಾರ್ಡ್ 14), ಸುನೀತ (ವಾರ್ಡ್ 17).
ಮೆನ್ನಬೆಟ್ಟು ವಲಯ: ಚಂದ್ರ ರಾಣ್ಯ (ವಾರ್ಡ್ 10), ಪ್ರಕಾಶ್ ಆಚಾರ್ಯ (ವಾರ್ಡ್ 8).
ಇತರೆ ವಾರ್ಡ್ಗಳು: ಪ್ರತಿಮಾ ಪ್ರಶಾಂತ್ (ವಾರ್ಡ್ 9), ಕುಶಲತಾ (ಎಳತ್ತೂರು ವಾರ್ಡ್ 18).
ಈ ಬಾರಿಯ ಚುನಾವಣೆಯಲ್ಲಿ ಹಲವು ಪ್ರಭಾವಿ ನಾಯಕರು ಸೋಲಿನ ರುಚಿ ನೋಡಿದ್ದಾರೆ. ಕಾಂಗ್ರೆಸ್ನ ಡಾ. ಸಂಜೀವ ಮಡಿವಾಳ, ಪವನ್ ಶೆಟ್ಟಿಗಾರ್ (ಪುನರೂರು), ತಿಮ್ಮಪ್ಪ ಕೋಟ್ಯಾನ್ (ಕಟೀಲು) ಮತ್ತು ಮಯ್ಯದ್ದಿ (ಗುತ್ತಗಾಡು) ಸೋತ ಪ್ರಮುಖರಾದರೆ, ಎಳತ್ತೂರು ವಾರ್ಡ್ನಲ್ಲಿ ಬಿಜೆಪಿಯ ಶ್ಯಾಮಲ ಹೆಗ್ಡೆ ಅವರು ಪರಾಭವಗೊಂಡಿದ್ದಾರೆ.

