ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭಾನುವಾರ ಭೇಟಿ ನೀಡಿದರು.
ಶ್ರೀ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಳದ ಅರ್ಚಕರು ರಾಹುಲ್ಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಆನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದಲ್ಲಿಯೇ ಪ್ರಸಾದ ಭೋಜನ ಸ್ವೀಕರಿಸಿದರು.
ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್. ಸ್ವಾಗತಿಸಿದರು. ಕುಕ್ಕೆ ಸುಬ್ರಹ್ಮಣ್ಯನ ಅನನ್ಯ ಭಕ್ತರಾದ ಇವರು ಪ್ರತಿವರ್ಷ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆಯುತ್ತಿದ್ದಾರೆ.