ಹೊಸದಿಗಂತ ಡಿಜಿಟಲ್ ಡೆಸ್ಕ್ :
ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿಫಾರ್ಮ್ ಕಳೆದುಕೊಂಡಿರುವ ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ (KL Rahul) ಪತ್ನಿ ಅಥಿಯಾ ಶೆಟ್ಟಿ (Athiya Shetty) ಜೊತೆ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
3ನೇ ಟೆಸ್ಟ್ಗಾಗಿ ಭಾರತ ತಂಡ ಇಂದೋರ್ ತಲುಪಿದ್ದು, ಭಾನುವಾರ ಮುಂಜಾನೆ 4 ಗಂಟೆ ವೇಳೆಗೆ ರಾಹುಲ್ ಪತ್ನಿಯೊಂದಿಗೆ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwar Temple) ಭೇಟಿ ನೀಡಿದ್ದರು. ಪ್ರಮುಖ ಭಸ್ಮ ಆರತಿಯಲ್ಲೂ ದಂಪತಿ ಭಾಗವಹಿಸಿದರು.
ದೇವಸ್ಥಾನದ ನವಗ್ರಹಕ್ಕೆ ತೆರಳಿದ್ದ ನವದಂಪತಿ ಪೂಜಾ ಕೈಂಕರ್ಯಗಳನ್ನು ವಿಧಿ ವಿಧಾನಗಳನ್ನು ನೆರವೇರಿಸಿದರು. ನಂದಿ ಸಭಾಂಗಣದಲ್ಲಿ ಕೆಲಹೊತ್ತು ಧ್ಯಾನ ಮಾಡಿದರು.
ಮಹಾಕಾಳೇಶ್ವರನಿಗೆ ಜಲಾಭಿಷೇಕ ನಡೆಯಿತು. ಅರ್ಚಕರು ಹಾಲು, ಮೊಸರು, ತುಪ್ಪ, ಸಕ್ಕರೆ ಮತ್ತು ಹಣ್ಣಿನ ರಸದಿಂದ ಅಭಿಷೇಕ ಮಾಡಿದ ಪೂಜಾ ವಿಧಿ ವಿಧಾನಗಳಲ್ಲೂ ಪಾಲ್ಗೊಂಡಿದ್ದರು.