ಹಾಸನ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆಗೊಳಿಸುವಂತೆ ಕೆಎನ್​ ರಾಜಣ್ಣ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಉಸ್ತವಾರಿಯಿಂದ ಬಿಡುಗಡೆ ಕೋರಿ ಮುಖ್ಯಮಂತ್ರಿಗಳಿಗೆ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಕೊಟ್ಟಿದ್ದೇನೆ. ನನ್ನ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿಬೇಕಿದೆ. ಹೀಗಾಗಿ, ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಲಿತ ಸಚಿವರಿಂದ ಪ್ರತ್ಯೇಕ ಸಮಾವೇಶದ ಅಗತ್ಯವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾನು ಎಸ್​ಟಿ ಸಮುದಾಯದ ಮತಗಳಿಂದ ಮಾತ್ರ ಗೆದ್ದಿಲ್ಲ. ಎಲ್ಲ ಸಮುದಾಯದ ಆಶೀರ್ವಾದ ಬೇಕು. ಕಾಂಗ್ರೆಸ್​ಗೆ ಯಾವ ಸಮಾವೇಶ ಮಾಡಿದರೆ ಒಳ್ಳೆಯದೋ, ಆ ಸಮಾವೇಶ ಮಾಡಬೇಕು. ಮತ್ತೆ ಕಾಂಗ್ರೆಸ್​ ಅಧಿಕಾರಕ್ಕೆ ಬರಲು ಜಾಗೃತಿ ಮೂಡಿಸಬೇಕಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!