ಹೊಸ ದಿಗಂತ ವರದಿ, ಮಡಿಕೇರಿ:
ಕಂದಾಯ ಸಚಿವ ಆರ್.ಅಶೋಕ್ ಅವರು ಬುಧವಾರ ಸಂಜೆ ಕೊಡಗು ಜಿಲ್ಲೆಗೆ ಆಗಮಿಸಿದ್ದು, ಗುರುವಾರ ಭೂಕಂಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರಿನಿಂದ ಬುಧವಾರ ಸಂಜೆ ಕೊಡಗಿಗೆ ಆಗಮಿಸಿದ ಸಚಿವರು, ಕೂಡಿಗೆಯಲ್ಲಿ ಹಾರಂಗಿ ಹಾಗೂ ಕಾವೇರಿ ನದಿಗಳ ಸಂಗಮ ಪ್ರದೇಶವನ್ನು ವೀಕ್ಷಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಕಾವೇರಿ ನೀರಾವರಿ ನಿಗಮದ ಇಇ ಪುಟ್ಟಸ್ವಾಮಿ ಮತ್ತಿತರರು ಇದ್ದರು.